23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಜಿಲ್ಲಾ ಸುದ್ದಿವರದಿ

ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ – ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ ಗಾಯ: ಹೈವೇ ಪಟ್ರೊಲ್ ಸಿಬ್ಬಂದಿ ಗಳಿಂದ ರಕ್ಷಣೆ

ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.

ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya
error: Content is protected !!