25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!