July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು.

ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ ಈ ದೇಶ ಅಲ್ಲ, ಜಗತ್ತೇ ಇದೆ. ಇಂದು ನಾನು ಮಾತನಾಡುತ್ತಿದ್ದೇನೆ. ನನ್ನನ್ನು ಜೈಲಿಗೆ ಹಾಕಿ, ಅದಕ್ಕೂ ನಾನು ಸಿದ್ಧನಿದ್ದೇನೆ ಎಂದು ಭಾವುಕರಾದರು.

ಎಸ್‌ಐಟಿಯವರು ಧರ್ಮಸ್ಥಳದ ವಠಾರ ಅಗೆಯುತ್ತಿದ್ದಾರೆ, ಶವ ಹುಡುಕುತ್ತಿದ್ದಾರೆ. ನಿಮಗೆ ಅಲ್ಲಿ ಈವರೆಗೆ ಏನೂ ಸಿಕ್ಕಿಲ್ಲ, ಮುಂದೆಯೂ ಸಿಗುವುದಿಲ್ಲ. ಧರ್ಮಸ್ಥಳ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ? ನೀವೇಕೆ ಬಾಯಿ ಬಿಡುತ್ತಿಲ್ಲ? ಒಂದು ದೇವಸ್ಥಾನ ಹಾಳು ಮಾಡುವಾಗ ಸಿಎಂ ಮಾತಾಡುತ್ತಿಲ್ಲ. ನಮಗೆ ನಾಚಿಗೆ ಆಗುತ್ತಿದೆ. ಧರ್ಮಸ್ಥಳ ಹಾಳು ಮಾಡಲು ಈ ಪೂಜಾರಿ ಬಿಡುವುದಿಲ್ಲ ಎಂದರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!