September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

ಬೆಳ್ತಂಗಡಿ: ಕಲಿಯುಗದ ಕಾಮಧೇನು, ಭಕ್ತರ ಆರಧ್ಯ ದೇವರೆಂದೇ ಕರೆಯಲ್ಪಡುವ ಬೆಳ್ತಂಗಡಿ ತಾಲೂಕಿನಲ್ಲಿ ನೆಲೆನಿಂತ ಶ್ರೀಗುರುರಾಘವೇಂದ್ರ ಮಠದ ಬೆಳವಣಿಗೆ ತುಂಬಾ ಮಹತ್ವದ್ದು. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಶಿಸ್ತು ಮತ್ತು ಸ್ವಚ್ಛತೆಗೆ ಆಧ್ಯತೆ ನೀಡಿದ್ದಾರೆ ಎಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಲಿ ಬಲಿಪ ಹೇಳಿದರು.

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀಗುರುರಾಘವೇಂದ್ರ ಮಠದಲ್ಲಿ ಆ.10 ಆ.12 ರವರೆಗೆ ನಡೆಯುವ ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವದ ಪ್ರಯುಕ್ತ ಆ.10 ರಂದು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೆಳ್ತಂಗಡಿ ತುಳು ಶಿವಳ್ಳಿ ಸಭಾ ಒಕ್ಕೂಟ ಅಧ್ಯಕ್ಷ ರಾಜ ಪ್ರಸಾದ್ ಪೊಳ್ನಾಯ ಶ್ರೀ ಗಣಪತಿ ಹೋಮದೊಂದಿಗೆ ಚಾಲನೆ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಳ್ತಂಗಡಿಯ ಸುಂದರ ಪರಿಸರದಲ್ಲಿ ಸೋಮಾವತಿ ನದಿ ತಟದಲ್ಲಿರುವ ರಾಯರ ಮಂದಿರ, ಸಣ್ಣ ಮಂತ್ರಾಲಯ ಎಂಬ ನಂಬಿಕೆಗೆ ಪಾತ್ರವಾಗಿದೆ. ವರ್ಷದಿಂದ ವರ್ಷಕ್ಕೆ ಇದರ ಪ್ರತೀತಿ ಹೆಚ್ಚುತ್ತಿದೆ. ಭಕ್ತರ ಸಂಖ್ಯೆಯು ಅಧಿಕವಾಗುತ್ತಿದೆ ಎಂದರು.

ಲಾಯಿಲ ಗ್ರಾ.ಪಂ ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪಾಧ್ಯಕ್ಷ ವಿ.ಆರ್.ನಾಯಕ್ ಮತ್ತು ಮಹಾಬಲ ಶೆಟ್ಟಿ ಹಾಗೂ ಟ್ರಸ್ಟಿ ಸೋಮೇಗೌಡ, ಸುಶೀಲಾ ಹೆಗ್ಡೆ ಉಪಸ್ಥಿತರಿದ್ದರು.

ಟ್ರಸ್ಟಿ, ನಿವೃತ್ತ ಪ್ರಾಂಶುಪಾಲ ಏ.ಕೃಷ್ಣಪ್ಪ ಪೂಜಾರಿ ಪ್ರಾಸ್ತಾವಿಸಿ ಸ್ವಾಗತಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು. ನೂರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ಇಂದು( ಆ.11) ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದಲ್ಲಿ ನಿರ್ಮಾಣವಾದ ಶ್ರೀಗುರು ಪ್ರಸಾದ ಮಂಟಪ ಉದ್ಘಾಟನೆ ನೆರವೇರಲಿದೆ.

Related posts

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!