ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳ ಆರೋಪಕ್ಕೆ ಸಂಬಂಧಿಸಿ ನ್ಯಾಯೋಚಿತ ತನಿಖೆ ನಡೆದು ಪ್ರಕರಣಕ್ಕೆ ನ್ಯಾಯ ದೊರೆಯಲಿ. ಈ ವೇಳೆ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ನ್ಯಾಯ ತೀರ್ಮಾನ ಆಗುವವರೆಗೆ ಸಂಯಮ ಕಾಯ್ದುಕೊಳ್ಳಬೇಕು ಎಂದು ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಸರ್ಕಾರದ ಆದೇಶದ ಮೇರೆಗೆ ಅಸಹಜ ಮರಣಗಳ ನ್ಯಾಯೋಚಿತ ತನಿಖೆ ನಡೆಯುತ್ತಿದ್ದು, ಪ್ರಜ್ಞಾವಂತ ನಾಗರಿಕರು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಈಗಾಗಲೇ ಅದನ್ನು ಸ್ವಾಗತಿಸಿದ್ದಾರೆ. ಎಸ್ಐಟಿ ಪ್ರಾಮಾಣಿಕ ತನಿಖೆ ನಡೆಸುತ್ತಿದೆ. ಈ ಸಂದರ್ಭ ಶ್ರೀಕ್ಷೇತ್ರವನ್ನು ಗುರಿಯಾಗಿಸಿಕೊಂಡು ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.











