ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಆ.10 ರಂದು ನಡೆಯಿತು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯ ನಗರ ಉದಯ ನಗರ, ಸುದೆಮುಗೇರು ಪ್ರದೇಶದ ಮಕ್ಕಳು, ಹಿರಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡರು.

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟ ಉದ್ಘಾಟನೆ ಮಾಡಿದರು

ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಿಯಾಝ್ ಸಂಜಯನಗರ ಪಂದ್ಯಾಟವನ್ನು ನಡೆಸಿಕೊಟ್ಟರು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಹನೀಫ್ ವರ್ಷಾ, ಜೊತೆ ಕಾರ್ಯದರ್ಶಿ ಮಹಮ್ಮದ್, ಉಪಾಧ್ಯಕ್ಷರಾದ ಇಸ್ಮಾಯಿಲ್, ಕೋಶಾಧಿಕಾರಿಯಾದ ರಿಜ್ವಾನ್ ಬಿ.ಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ರಶೀದ್ ಬೆಳ್ತಂಗಡಿ, ಅಬ್ಬಾಸ್ ಸಂಜಯನಗರ, ಶೈರೋಝ್ ಉದಯನಗರ ಕ್ರೀಡಾಕೂಟವನ್ನು ನಡೆಸಿಕೊಟ್ಟರು.


ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ವಾತಂತ್ರ್ಯ ದಿನದಂದು ಸಂಜಯ್ ಗ್ಲೋಬಲ್ ಫೌಂಡೇಶನ್ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Related posts

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ಗುರುವಾಯನಕೆರೆ ಮಯೂರ ಆರ್ಕೇಡ್‌ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya
error: Content is protected !!