25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!