July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ಅಣ್ಣಾಮಲೈ ವಿವಿಯಿಂದ ಡಾಕ್ಟರೇಟ್‌ ಪದವಿ

ಬೆಳ್ತಂಗಡಿ: ನಾರಾವಿ ಗ್ರಾಮದ ಹಿರ್ತ್ತೊಟ್ಟು ಜಿನ್ನಪ್ಪ ಬಿ. ಪೂಜಾರಿ ಅವರ ಪತ್ನಿ, ಸಹ ಪ್ರಾಧ್ಯಾಪಕಿ ಹೇಮಲತಾ ಅವರಿಗೆ ತಮಿಳುನಾಡಿನ ಅಣ್ಣಾಮಲೈ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ದೊರಕಿದೆ.

ಮಂಗಳೂರಿನ ಬೆಸೆಂಟ್‌ ಮಹಿಳಾ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಮತ್ತು ಸೆಕೆಟೇರಿಯಲ್‌ ಪ್ರಾಕ್ಟೀಸ್‌ ವಿಭಾಗದ ಸಹ ಪ್ರಾಧ್ಯಾಪಕಿಯಾಗಿರುವ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ.ರಾಮು ಎನ್‌ ಮತ್ತು ಆರ್‌.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ.ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿದ್ದರು.

ಹೇಮಲತಾ ಅವರು ಮಂಡಿಸಿದ ‘ಇಂಪ್ಯಾಕ್ಟ್‌ ಆಫ್‌ ಟ್ರೈನಿಂಗ್‌ ಆನ್‌ ದಿ ಸಾಫ್ಟ್‌ ಅಂಡ್‌ ಹಾರ್ಡ್‌ ಸ್ಕಿಲ್ಸ್‌ ಟುವರ್ಡ್ಸ್‌ ಎಫೀಶಿಯೆನ್ಸಿ ಆಫ್‌ ಎಂಪ್ಲಾಯಿಸ್‌ ಆಫ್‌ ಎಂಎಸ್‌ಎಂಇಎಸ್‌ ಇನ್‌ ದಕ್ಷಿಣ ಕನ್ನಡ ಡಿಸ್ಟ್ರಿಕ್‌’ (Impact of training on the Soft and Hard skills towards efficiency of employees of MSMEs in Dakshina Kannada District) ಎಂಬ ಮಹಾಪ್ರಬಂಧ ಡಾಕ್ಟರೇಟ್‌ ಪದವಿಗೆ ಆಯ್ಕೆಯಾಗಿದೆ.

ಹೇಮಲತಾ ಅವರು ಶಿರ್ವ ಮಂಚಕಲ್‌ ಗ್ರಾಮದ ಸೋಮಪ್ಪ ಮತ್ತು ಕಂಪಾಬೈ ದಂಪತಿಯ ಪುತ್ರಿ.

Related posts

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya
error: Content is protected !!