25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya
error: Content is protected !!