22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ ದುರಸ್ತಿ ಮಾಡಲಾಯಿತು.

ಸಂಘದ ಅಧ್ಯಕ್ಷ ಸಿದ್ದೀಕ್ ಕೆಂಪಿ ಅವರ ನೇತೃತ್ವದಲ್ಲಿ ನಡೆದ ಈ ಶ್ರಮದಾನದಲ್ಲಿ ಜೆಸಿಬಿ ಯಂತ್ರದ ಮೂಲಕ ರಸ್ತೆ ಗುಂಡಿ‌ ಹಾಗೂ‌ ಏರು‌ತಗ್ಗುಗಳನ್ನು ಸಮತಟ್ಟುಗೊಳಿಸಿ ತಾತ್ಕಾಲಿಕವಾಗಿ ಸರಾಗವಾಗಿ ಸಂಚರಿಸುವಂತೆ ಕ್ರಮ‌ವಹಿಸಲಾಯಿತು.

ಶ್ರಮದಾನದಲ್ಲಿ ಖಾಸಗಿ ಬಸ್ಸು ನೌಕರರ ಸಂಘದ ಪ್ರಮುಖರಾದ ಇಲ್ಯಾಸ್ ಕರಾಯ, ನಾರಾಯಣ, ಗಣೇಶ, ಜಯ, ಸಾದಿಕ್, ಕೆ‌ಎಸ್ ಅಬ್ದುಲ್ಲ, ಶಬೀರ್, ದಿನೇಶ್, ರಾಜೇಶ್, ಗಣೇಶ್ ಅಳಕೆ, ಬಾಬು, ಸತೀಶ್ ಕಾಮತ್, ಎಂ.ಕೆ ಮಠ, ದಿನೇಶ್ ಸಹಕರಿಸಿದರು. ತಂಡದ ಕಾರ್ಯವನ್ನು ಪ್ರಯಾಣಿಕರು ಕೊಂಡಾಡಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ”ಕ್ಕೆ ಚಾಲನೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!