23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಉಜಿರೆ ಹಾಗೂ ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಬ್ಲಾಕ್ ಬೆಲ್ಟ್ ಕ್ಯಾಟಗರಿಯಲ್ಲಿ ಸುಭಾಷ್(ಕಟ ಪ್ರಥಮ ಹಾಗು ಕುಮಿಟೆ ದ್ವಿತೀಯ), ಮೋಹನ್ (ಕಟಾ ದ್ವಿತೀಯ ಹಾಗು ಕುಮಿಟೆ ಪ್ರಥಮ), ಶಹೀರ್ ಅನಸ್ (ಕುಮಿಟೆ ಪ್ರಥಮ), ಬ್ರೌನ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ (ಕಟಾ ಪ್ರಥಮ ಹಾಗೂ ಕುಮಿಟೆ ಪ್ರಥಮ), ಶೇಕ್ ಅಝೀಮ್(ಕಟಾ ತೃತೀಯ ಹಾಗೂ ಕುಮಿಟೆ ಪ್ರಥಮ) ಪ್ರಶಸ್ತಿಯನ್ನು ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಿಗೆ ಯು ಎಸ್ ಎ ಮೂಲದ ಗ್ರಾಂಡ್ ಮಾಸ್ಟರ್ ಪಿಯರ್ ಎಫ್ ಮೌಲೆ, ಆಯೋಜಕರಾದ ಶಿಹಾನ್ ವಿನೋದ್ ಶಿವಮೊಗ್ಗ ಹಾಗೂ ಇನ್ನಿತರ ಗಣ್ಯರು ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಿದರು. ಇವರು ರೆನ್ಶಿ ಮುಹಮ್ಮದ್ ನದೀಮ್ ಹಾಗೂ ಶಿಹಾನ್ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದ ವಿದ್ಯಾರ್ಥಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!