23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕಡಿರುದ್ಯಾವರ : ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯ ಸಂಘ ಕಡಿರುದ್ಯಾವರ ಮಹಿಳಾ ಮಂಡಲದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.9 ರಂದು ನಡೆಯಿತು.

ಗುತ್ತಿಗಾರ್ ರಬ್ಬರ್ ಸೊಸೈಟಿ ನಿರ್ದೇಶಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ವಳಂಬ್ರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸುರೇಖ ಮಂಜುನಾಥ, ಸಂಜೀವಿನಿ ಸಂಘದ ಲೆಕ್ಕ ಪರಿಶೋಧಕಿ ಸುಪ್ರಿಯ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರ ಪಟ್ಟಿಯನ್ನು ಶ್ರೀಮತಿ ನಳಿನಿ ಓದಿಹೇಳಿದರು. ಕಾರ್ಯಕ್ರಮದಲ್ಲಿ ಸುಮಾರು 43 ರೀತಿಯ ಆಟಿ ಖಾದ್ಯ ಗನ್ನು ಸದಸ್ಯರು ತಯಾರಿಸಿ ಪ್ರದರ್ಶಿಸಿದರು. ಆಟಿ ಆಚರಣೆಯ ಬಗ್ಗೆ ಹಿರಿಯ ನಾಗರಿಕರಾದ ಡೀಕಮ್ಮ ವಿವರಿಸಿದರು.

ಮಹಿಳಾ ಮಂಡಲದ ಕೋಶಾಧಿಕಾರಿ ಸಂಧ್ಯಾ ಕಿರಣ್ ಪ್ರಾರ್ಥಿಸಿ, ಉಪಾಧ್ಯಕ್ಷೆ ರಮಾ ಪರಾಂಜಪೆ ಸ್ವಾಗತಿಸಿದರು. ಭವ್ಯಶ್ರೀ ಧನ್ಯವಾದವಿತ್ತರು. ಭಾರತಿ ಉದ್ದಾರ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!