23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ ನೇತೃತ್ವದಲ್ಲಿ ಕಳೆದ ಐದು ವರ್ಷಗಳಲ್ಲಿ ಸಿಎಸ್ಆರ್ ಫಂಡ್ ನಿಂದ ಸುಮಾರು ರೂ 4.50 ಕೋಟಿ ವೆಚ್ಚದ ಕೆಲಸ ಕಾರ್ಯಗಳು ತಾಲೂಕಿನ ಅನೇಕ ಶಾಲೆಗಳಲ್ಲಿ ನಡೆದಿದೆ.ರೋಟರಿ ಬೆಂಗಳೂರು ಇಂದಿರಾನಗರ ಸಂಸ್ಥೆ ಮತ್ತು ಕ್ಯಾನ್ ಫಿನ್ ಹೋಮ್ಸ್ ಸಹಭಾಗಿತ್ವದಲ್ಲಿ ಕಲ್ಮಂಜ ಸರಕಾರಿ ಪ್ರೌಢ ಶಾಲೆ ಹುಡುಗಿಯರಿಗೆ ನೂತನ ಶೌಚಾಲಯ ನಿರ್ಮಾಣ, ಸರಕಾರಿ ಪ್ರೌಢಶಾಲೆ ಬಂಗಾಡಿ ಇಲ್ಲಿ ಹುಡುಗಿಯರ ಶೌಚಾಲಯವನ್ನು ಆಧುನೀಕರಣಗೊಳಿಸಲಾಗಿದ್ದು ರೂ.17 ಲಕ್ಷ ವೆಚ್ಚದಲ್ಲಿ ಈ ಕಾಮಗಾರಿ ಪೂರ್ಣಗೊಂಡಿದೆ.ಜೊತೆಗೆ ಖಾಸಗಿ ಶಾಲೆಯ ಪಿಯುಸಿ ಮತ್ತು ಪ್ರಥಮ ಡಿಗ್ರಿಯ ಅರ್ಹ ಬಡ ಮಕ್ಕಳಿಗೆ ಸುಮಾರು 20 ಲಕ್ಷದಷ್ಟು ಸ್ಕಾಲರ್ ಶಿಪ್ ಹಸ್ತಾಂತರ ಕಾರ್ಯಕ್ರಮವು ಆ. 14 ರಂದು ನಡೆಯಲಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಹೇಳಿದರು.

ಅವರು ಆ.12 ರಂದು ಬೆಳ್ತಂಗಡಿ ಪತ್ರಿಕಾ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನಮ್ಮ ಸದಸ್ಯರಾದ ರೋ. ವಿದ್ಯಾಕುಮಾರ್ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಸುಮಾರು 60 ಸಾವಿರ ರೂಪಾಯಿ ವ್ಯಯಿಸಿ ಕಲ್ಮಂಜ ಪ್ರೌಢ ಶಾಲೆಗೆ ಕೈ ತೊಳೆಯುವ ವ್ಯವಸ್ಥೆ ಮಾಡಿ ರೋಟರಿ ಕ್ಲಬ್ ಬೆಳ್ತಂಗಡಿಯ ಪ್ಲಾಟಿನಂ ಸದಸ್ಯರ ಪಟ್ಟಿಗೆ ಸೇರಿದ್ದಾರೆ. ಈಗಾಗಲೇ ನಮ್ಮ ಸದಸ್ಯರುಗಳಾದ ಡಾ.ಶಶಿಧರ್ ಡೋಂಗ್ರೆ ಮತ್ತು ಧನಂಜಯ್ ರಾವ್ ಇಂತಹ ಸಾಧನೆ ಮಾಡಿರುತ್ತಾರೆ ಎಂದರು.

ಈ ಎರಡು ಪ್ರಾಜೆಕ್ಟ್‌ಗಳ ಉದ್ಘಾಟನೆ ಜೊತೆಗೆ ಕ್ಯಾನ್ ಪಿನ್ ಸಂಸ್ಥೆ ಲಿಮಿಟೆಡ್ ಬೆಳ್ತಂಗಡಿ ರೋಟರಿ ಕ್ಲಬ್ ಮೂಲಕ ನೀಡಲ್ಪಡುವ ಸುಮಾರು 20 ಲಕ್ಷ ರೂಪಾಯಿ ಸ್ಕಾಲರ್ ಶಿಪ್ ಅನ್ನು, ಬೆಳ್ತಂಗಡಿ ತಾಲೂಕಿನ ಎಲ್ಲಾ ಖಾಸಗೀ ಪಿಯುಸಿ ಮತ್ತು ಡಿಗ್ರಿ ಕಾಲೇಜ್ ಹಾಗೂ ಪಿಜಿ ಕಾಲೇಜಿನ ಒಟ್ಟು 222 ಅರ್ಹ ಬಡ ವಿದ್ಯಾರ್ಥಿಗಳಿಗೆ ಹಸ್ತಾಂತರ ಮಾಡಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ಕ್ಯಾನ್ ಪಿನ್ ಸಂಸ್ಥೆಯ ಡಿ.ಜಿ.ಎಮ್ ಪ್ರಶಾಂತ ಜೋಷಿ, ರೋಟರಿ ಡಿಸ್ಟ್ರಿಕ್ಟ್ 3181 ಡಿಸ್ಟ್ರಿಕ್ಟ್ ಗವರ್ನರ್ ರೋ.ರಾಮಕೃಷ್ಣ ಪಿ.ಕೆ,ರೋಟರಿ ಬೆಂಗಳೂರು ಇಂದಿರಾನಗರದ ಕಳೆದ ಸಾಲಿನ ಅಧ್ಯಕ್ಷೆ ರೋ.ಸುಪ್ರಿಯ ಖಾಂದಾರಿ, ಕ್ಯಾನ್ ಫಿನ್ ಹೋಮ್ಸ್ ನ ಡೆಪ್ಯೂಟಿ ಮೆನೇಜರ್ ಚಿತ್ರಾಂಗದ ಸಾರಂಗಿ,ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ‌.ಮೋಹನ್ ಕುಮಾರ್ ಇವರು ಭಾಗವಹಿಸಲಿದ್ದಾರೆ ಎಂದರು.

ಈಗಾಗಲೇ ರೋಟರಿ ಬೆಂಗಳೂರು ಇಂದಿರಾನಗರ ಸಂಸ್ಥೆಯೊಡನೆ ಮೂರು ವರ್ಷಕ್ಕೆ ಒಡಂಬಡಿಕೆ ಮಾಡಿಕೊಂಡಿದ್ದೇವೆ. ಅದರ ಪ್ರಕಾರ, ಈ ವರ್ಷ ಸುಮಾರು 10 ಲಕ್ಷ ಸ್ಕಾಲರ್ ಶಿಪ್ ನ್ನು ಮುಂದಿನ ದಿನಗಳಲ್ಲಿ ಸರಕಾರಿ ಪಿಯುಸಿ ಮತ್ತು ಡಿಗ್ರಿ ಮಕ್ಕಳಿಗೆ ನೀಡುವ ಪ್ರಯತ್ನ ಮಾಡಲಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ಎಂ.ಎಂ ದಯಾಕರ್, ಸ್ಕಾಲರ್ ಶಿಪ್ ಕಮಿಟಿ ಚೆಯರ್ ಮೆನ್ ಅಬೂಬಕ್ಕರ್,ಪೂರ್ವಾಧ್ಯಕ್ಷ ಯಶವಂತ್ ಪಟವರ್ಧನ್ ಉಪಸ್ಥಿತರಿದ್ದರು.

Related posts

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!