September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕಡಿರುದ್ಯಾವರ : ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯ ಸಂಘ ಕಡಿರುದ್ಯಾವರ ಮಹಿಳಾ ಮಂಡಲದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.9 ರಂದು ನಡೆಯಿತು.

ಗುತ್ತಿಗಾರ್ ರಬ್ಬರ್ ಸೊಸೈಟಿ ನಿರ್ದೇಶಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ವಳಂಬ್ರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸುರೇಖ ಮಂಜುನಾಥ, ಸಂಜೀವಿನಿ ಸಂಘದ ಲೆಕ್ಕ ಪರಿಶೋಧಕಿ ಸುಪ್ರಿಯ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರ ಪಟ್ಟಿಯನ್ನು ಶ್ರೀಮತಿ ನಳಿನಿ ಓದಿಹೇಳಿದರು. ಕಾರ್ಯಕ್ರಮದಲ್ಲಿ ಸುಮಾರು 43 ರೀತಿಯ ಆಟಿ ಖಾದ್ಯ ಗನ್ನು ಸದಸ್ಯರು ತಯಾರಿಸಿ ಪ್ರದರ್ಶಿಸಿದರು. ಆಟಿ ಆಚರಣೆಯ ಬಗ್ಗೆ ಹಿರಿಯ ನಾಗರಿಕರಾದ ಡೀಕಮ್ಮ ವಿವರಿಸಿದರು.

ಮಹಿಳಾ ಮಂಡಲದ ಕೋಶಾಧಿಕಾರಿ ಸಂಧ್ಯಾ ಕಿರಣ್ ಪ್ರಾರ್ಥಿಸಿ, ಉಪಾಧ್ಯಕ್ಷೆ ರಮಾ ಪರಾಂಜಪೆ ಸ್ವಾಗತಿಸಿದರು. ಭವ್ಯಶ್ರೀ ಧನ್ಯವಾದವಿತ್ತರು. ಭಾರತಿ ಉದ್ದಾರ ಕಾರ್ಯಕ್ರಮ ನಿರೂಪಿಸಿದರು.

Related posts

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya
error: Content is protected !!