25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕಡಿರುದ್ಯಾವರ : ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯ ಸಂಘ ಕಡಿರುದ್ಯಾವರ ಮಹಿಳಾ ಮಂಡಲದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.9 ರಂದು ನಡೆಯಿತು.

ಗುತ್ತಿಗಾರ್ ರಬ್ಬರ್ ಸೊಸೈಟಿ ನಿರ್ದೇಶಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ವಳಂಬ್ರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸುರೇಖ ಮಂಜುನಾಥ, ಸಂಜೀವಿನಿ ಸಂಘದ ಲೆಕ್ಕ ಪರಿಶೋಧಕಿ ಸುಪ್ರಿಯ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರ ಪಟ್ಟಿಯನ್ನು ಶ್ರೀಮತಿ ನಳಿನಿ ಓದಿಹೇಳಿದರು. ಕಾರ್ಯಕ್ರಮದಲ್ಲಿ ಸುಮಾರು 43 ರೀತಿಯ ಆಟಿ ಖಾದ್ಯ ಗನ್ನು ಸದಸ್ಯರು ತಯಾರಿಸಿ ಪ್ರದರ್ಶಿಸಿದರು. ಆಟಿ ಆಚರಣೆಯ ಬಗ್ಗೆ ಹಿರಿಯ ನಾಗರಿಕರಾದ ಡೀಕಮ್ಮ ವಿವರಿಸಿದರು.

ಮಹಿಳಾ ಮಂಡಲದ ಕೋಶಾಧಿಕಾರಿ ಸಂಧ್ಯಾ ಕಿರಣ್ ಪ್ರಾರ್ಥಿಸಿ, ಉಪಾಧ್ಯಕ್ಷೆ ರಮಾ ಪರಾಂಜಪೆ ಸ್ವಾಗತಿಸಿದರು. ಭವ್ಯಶ್ರೀ ಧನ್ಯವಾದವಿತ್ತರು. ಭಾರತಿ ಉದ್ದಾರ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ: ರುಡ್ ಸೆಟ್ ಸಮೀಪ ರಸ್ತೆಗೆ ಬಿದ್ದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!