25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

ಮಡಂತ್ಯಾರು: ಬಂಟರ ಯಾನೆ ನಾಡವರ ಸಂಘ (ರಿ) ಬೆಳ್ತಂಗಡಿ ,ಬಂಟರ ಮಹಿಳಾ ಸಮಿತಿ ಮಡಂತ್ಯಾರು ವಲಯ ಇದರ ಆಶ್ರಯದಲ್ಲಿ “ಆಟಿಡೊಂಜಿ ಕೂಟ” ಕಾರ್ಯಕ್ರಮ ಆ.10 ರಂದು ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಶಾರದಾ ಮತ್ತು ವಿಠಲ್ ಶೆಟ್ಟಿ ದಂಪತಿಗಳು ಮೂಡಯೂರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಡಂತ್ಯಾರು ವಲಯ ಬಂಟರ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ದಿವ್ಯ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ವಿಂಧ್ಯಾ ಎಸ್ ರೈ ಮಾತನಾಡಿ ಆಟಿ ತಿಂಗಳಲ್ಲಿ ಸಂಘಟನೆಗಳು ಇಂತಹ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಸಂಸ್ಕೃತಿ ಆಚಾರ ವಿಚಾರ ಪರಂಪರೆಯನ್ನು ಮುಂದುವರಿಸಿಕೊಂಡು ಬರೋಣ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಮಡಂತ್ಯಾರು ವಲಯ ಬಂಟರ ಸಂಘ ಅಧ್ಯಕ್ಷ ಕೆ ದಿವಾಕರ ಶೆಟ್ಟಿ ಕಂಗಿತ್ತಿಲು, ಬೆಳ್ತಂಗಡಿ ತಾಲೂಕು ಮಹಿಳಾ ಬಂಟರ ಸಂಘ ಅಧ್ಯಕ್ಷೆ ಜಯಲಕ್ಷ್ಮಿ ಎಸ್ ಸಾಮಾನಿ , ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕ ಎಂ ಜಯರಾಮ ಭಂಡಾರಿ ಧರ್ಮಸ್ಥಳ , ನಳಿನಿ ಎಂ ಪೂಂಜಾ ಮಿಥಿಲಾ ಗರ್ಡಾಡಿ, ಜಯರಾಮ ಶೆಟ್ಟಿ ಮುಂಡಾಡಿ ಗುತ್ತು ಪೂರ್ವಾಧ್ಯಕ್ಷರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ರಘುರಾಮ್ ಶೆಟ್ಟಿ ಸಾಧನಾ ಉಜಿರೆ ಸಂಘಟನಾ ಸಂಚಾಲಕರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಲಕ್ಷ್ಮಿ ಸಂಜೀವ ಶೆಟ್ಟಿ ಮುಗೆರೋಡಿ, ಪದ್ಮಾವತಿ ಆರ್ ಶೆಟ್ಟಿ ನೆತ್ತರ ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಮಚ್ಚಿನ, ಸುರೇಶ್ ಶೆಟ್ಟಿ ಬೊಳ್ಳಾಜೆ ವಲಯ ಸಂಚಾಲಕರು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ಸಂಗೀತಾ ಅರುಣ್ ಶೆಟ್ಟಿ ಉಪಾಧ್ಯಕ್ಷರು ಮಹಿಳಾ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಉಪಸ್ಥಿತರಿದ್ದರು.

ಶಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ರೇಖಾ ಶೆಟ್ಟಿ ಸ್ವಾಗತಿಸಿದರು. ರಮ್ಯಾ ಶೆಟ್ಟಿ ಧನ್ಯವಾದ ನೀಡಿದರು. ಮಡಂತ್ಯಾರು ವಲಯ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸುಮಾರು 54 ಬಗೆಯ ಆಟಿ ತಿಂಗಳ ವಿವಿಧ ಖಾದ್ಯಗಳೊoದಿಗೆ ಭೋಜನ ವಿಶೇಷವಾಗಿತ್ತು.

ವರದಿ : ಮನು ಮದ್ದಡ್ಕ

Related posts

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಗೆ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya
error: Content is protected !!