September 6, 2026
ತಾಲೂಕು ಸುದ್ದಿವರದಿ

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಮಲವಂತಿಗೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 10 ರಂದು ನಡೆದ ಮಲವಂತಿಗೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಕೆಮ್ಮಟೆ ವಸಂತ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮಂಡಲ ಕೋಶಾಧಿಕಾರಿ ಜಯಂತ ಗೌಡ ಗುರಿಪಳ್ಳ ಉದ್ಘಾಟನಾ ಭಾಷಣ ಮಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ವಕೀಲರಾದ ಯತೀಶ್ ಪಣೆಕ್ಕರ, ರೈತಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ ಬೈಠಕ್ ನೀಡಿದರು. ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ್ ಜೈನ್ ಎಳನೀರು, ಮಲವಂತಿಗೆ ಪ್ರಭಾರಿ ಆನಂದ ಅಡೀಲ್, ಮಲವಂತಿಗೆ ಶಕ್ತಿ ಕೇಂದ್ರ ಅಧ್ಯಕ್ಷ ಮಧುಸೂಧನ್ ಮಲ್ಲ, ಪಂಚಾಯತ್ ಉಪಾಧ್ಯಕ್ಷ ರೋಹಿಣಿ ಜಯವರ್ಮ, ಬೂತ್ ಸಮಿತಿಯ ಅಧ್ಯಕ್ಷರುಗಳಾದ ಗಣೇಶ್ ಗೌಡ, ರಾಧಾಕೃಷ್ಣ ನಡುಮಜಲು, ಅಶೋಕ್ ಕಡ್ತಿಕುಮೇರು, ಕಾರ್ಯದರ್ಶಿಗಳಾದ ಸತೀಶ್ ಮ್. ಕೆ, ಪುರಂದರ ನಂದಿಕಾಡು, ವಿನಯ ಚಂದ್ರ ಕಾಂಜಾನು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಜಯಂತ ಹೆಗ್ಡೆ ಬಿಜೆಪಿ ಗೀತೆ ಹಾಡುವ ಮೂಲಕ ಕಾರ್ಯಕ್ರಮ ಆರಂಭಗೊಂಡು, ಉಮೇಶ್ ಮಾಲೂರು ಸ್ವಾಗತಿಸಿ ನಿರ್ವಹಿಸಿದರು.

Related posts

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!