September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕಡಿರುದ್ಯಾವರ : ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯ ಸಂಘ ಕಡಿರುದ್ಯಾವರ ಮಹಿಳಾ ಮಂಡಲದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.9 ರಂದು ನಡೆಯಿತು.

ಗುತ್ತಿಗಾರ್ ರಬ್ಬರ್ ಸೊಸೈಟಿ ನಿರ್ದೇಶಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ವಳಂಬ್ರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸುರೇಖ ಮಂಜುನಾಥ, ಸಂಜೀವಿನಿ ಸಂಘದ ಲೆಕ್ಕ ಪರಿಶೋಧಕಿ ಸುಪ್ರಿಯ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರ ಪಟ್ಟಿಯನ್ನು ಶ್ರೀಮತಿ ನಳಿನಿ ಓದಿಹೇಳಿದರು. ಕಾರ್ಯಕ್ರಮದಲ್ಲಿ ಸುಮಾರು 43 ರೀತಿಯ ಆಟಿ ಖಾದ್ಯ ಗನ್ನು ಸದಸ್ಯರು ತಯಾರಿಸಿ ಪ್ರದರ್ಶಿಸಿದರು. ಆಟಿ ಆಚರಣೆಯ ಬಗ್ಗೆ ಹಿರಿಯ ನಾಗರಿಕರಾದ ಡೀಕಮ್ಮ ವಿವರಿಸಿದರು.

ಮಹಿಳಾ ಮಂಡಲದ ಕೋಶಾಧಿಕಾರಿ ಸಂಧ್ಯಾ ಕಿರಣ್ ಪ್ರಾರ್ಥಿಸಿ, ಉಪಾಧ್ಯಕ್ಷೆ ರಮಾ ಪರಾಂಜಪೆ ಸ್ವಾಗತಿಸಿದರು. ಭವ್ಯಶ್ರೀ ಧನ್ಯವಾದವಿತ್ತರು. ಭಾರತಿ ಉದ್ದಾರ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya
error: Content is protected !!