July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

ಕಡಿರುದ್ಯಾವರ : ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲ ಹಾಗೂ ಶ್ರೀ ವಿದ್ಯಾ ಸರಸ್ವತಿ ಸ್ವಸಹಾಯ ಸಂಘ ಕಡಿರುದ್ಯಾವರ ಮಹಿಳಾ ಮಂಡಲದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.9 ರಂದು ನಡೆಯಿತು.

ಗುತ್ತಿಗಾರ್ ರಬ್ಬರ್ ಸೊಸೈಟಿ ನಿರ್ದೇಶಕಿ ಶಶಿಕಲಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ವಳಂಬ್ರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಸುರೇಖ ಮಂಜುನಾಥ, ಸಂಜೀವಿನಿ ಸಂಘದ ಲೆಕ್ಕ ಪರಿಶೋಧಕಿ ಸುಪ್ರಿಯ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿಜೇತರ ಪಟ್ಟಿಯನ್ನು ಶ್ರೀಮತಿ ನಳಿನಿ ಓದಿಹೇಳಿದರು. ಕಾರ್ಯಕ್ರಮದಲ್ಲಿ ಸುಮಾರು 43 ರೀತಿಯ ಆಟಿ ಖಾದ್ಯ ಗನ್ನು ಸದಸ್ಯರು ತಯಾರಿಸಿ ಪ್ರದರ್ಶಿಸಿದರು. ಆಟಿ ಆಚರಣೆಯ ಬಗ್ಗೆ ಹಿರಿಯ ನಾಗರಿಕರಾದ ಡೀಕಮ್ಮ ವಿವರಿಸಿದರು.

ಮಹಿಳಾ ಮಂಡಲದ ಕೋಶಾಧಿಕಾರಿ ಸಂಧ್ಯಾ ಕಿರಣ್ ಪ್ರಾರ್ಥಿಸಿ, ಉಪಾಧ್ಯಕ್ಷೆ ರಮಾ ಪರಾಂಜಪೆ ಸ್ವಾಗತಿಸಿದರು. ಭವ್ಯಶ್ರೀ ಧನ್ಯವಾದವಿತ್ತರು. ಭಾರತಿ ಉದ್ದಾರ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ, ಹಾಗೂ ಮಹಿಳಾ ಸಂಘ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ : ಪರಮ ಪೂಜ್ಯ ಶ್ರೀ ಪೂರ್ಣಾನಂದ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
error: Content is protected !!