July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ನಿಡ್ಲೆ : ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಡ್ಲೆ, ಗ್ರಾಮ ಪಂಚಾಯತ್, ನಿಡ್ಲೆ ಮತ್ತು ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟ, ನಿಡ್ಲೆ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 34ನೇ ಟೈಲರಿಂಗ್‌ ತರಬೇತಿ ಶಿಬಿರದ ಉದ್ಘಾಟನೆ ಆ.11ರಂದು ನಿಡ್ಲೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ಅಧ್ಯಕ್ಷ ಧನಂಜಯ ಗೌಡ ಚಾಲನೆ ನೀಡಿ ನಾವು ಯಾವಾಗಲೂ ಇನ್ನೊಬ್ಬರ ನೆರಳಿನಲ್ಲಿ ಬದುಕದೆ ಸ್ವ – ಉದ್ಯೋಗ ಮಾಡುವುದರ ಮೂಲಕ ನಮ್ಮ ಬದುಕಿಗೆ ನಾವೇ ದಾರಿದೀಪವಾಗಬೇಕು, ಈ ತರಬೇತಿ ಶಿಬಿರವು ಸ್ವ-ಉದ್ಯೋಗದ ಕಡೆಗೆ ಮಹತ್ವದ ಹೆಜ್ಜೆಯಾಗಿದೆ ಎಂದರು.

ಕನ್ಯಾಡಿ ಸೇವಾಭಾರತಿ, ಕಾರ್ಯದರ್ಶಿ ಬಾಲಕೃಷ್ಣ ಮಾತನಾಡಿ ಮಹಿಳೆಯರು ಸ್ವಂತ ಕೆಲಸವನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತೇವೆ ಎಂಬ ಧೈರ್ಯ ಇದ್ದರೆ ಯಾವುದು ಅಸಾಧ್ಯವಾದ ಮಾತಲ್ಲ ಎಲ್ಲವೂ ಸಾಧ್ಯ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯ ಮೋಹನ್ ಪೂಜಾರಿ, ನಿಡ್ಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಹೇಮಾವತಿ, ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರಜನಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಒಟ್ಟು 32 ಮಂದಿ ಮಹಿಳಾ ಶಿಬಿರಾರ್ಥಿಗಳು ಭಾಗವಹಿಸಿದ್ದು, ಮಹಿಳಾ ಸಬಲಿಕರಣದತ್ತ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಾವತಿ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್, ಮೋನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋ – ಆರ್ಡಿನೇಟರ್ ಸುಮ ನಿರೂಪಿಸಿ, ಶ್ರೀಮತಿ ಸುಮನ ಧನ್ಯವಾದವಿತ್ತರು.

Related posts

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya
error: Content is protected !!