25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ರಕ್ಷಾ ಬಂಧನ ಆಚರಣೆ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ನೇತೃತ್ವದಲ್ಲಿ ಆ. 10 ರಂದು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಬಳಂಜ ಗ್ರಾಮ ಪಂಚಾಯತ್ ಮಾಜಿ‌ ಉಪಾಧ್ಯಕ್ಷ ಸದಾನಂದ ಸಾಲಿಯನ್ ಬಳಂಜ ರಕ್ಷಾ ಬಂಧನದ ಕುರಿತು ವಿಶೇಷ ಬೌದ್ಧಿಕ್ ನೀಡಿ ಎಲ್ಲರೂ ಸಹೋದರ ಭಾವದಿಂದ ಜೀವನ ನಡೆಸಿದಾಗ ಸಮಾಜದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಯಾಗಲು ಸಾಧ್ಯವಿದೆ ಎಂದು ನುಡಿದರು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ಕೃಷ್ಣ ಭಜನಾ ಮಂಡಳಿ ಸಂಚಾಲಕರಾದ ಪ್ರಮೋದ್ ಪೂಜಾರಿ ಸೂಳಬೆಟ್ಟು,ಮಂಡಳಿಯ ಅಧ್ಯಕ್ಷೆ ಕು.ಪ್ರಸಿದ್ದಿ ಶೆಟ್ಟಿ, ತರಬೇತುದಾರೆ ಕು.ಮಾನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಗಳಿ ಪರಿಸರದಲ್ಲಿ ಚಿರತೆ ಓಡಾಟ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya
error: Content is protected !!