23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಮಲವಂತಿಗೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

ಮಲವಂತಿಗೆ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ. 10 ರಂದು ನಡೆದ ಮಲವಂತಿಗೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಕೆಮ್ಮಟೆ ವಸಂತ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮಂಡಲ ಕೋಶಾಧಿಕಾರಿ ಜಯಂತ ಗೌಡ ಗುರಿಪಳ್ಳ ಉದ್ಘಾಟನಾ ಭಾಷಣ ಮಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ವಕೀಲರಾದ ಯತೀಶ್ ಪಣೆಕ್ಕರ, ರೈತಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಗೌಡ ನಾವೂರು, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ ಬೈಠಕ್ ನೀಡಿದರು. ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ್ ಜೈನ್ ಎಳನೀರು, ಮಲವಂತಿಗೆ ಪ್ರಭಾರಿ ಆನಂದ ಅಡೀಲ್, ಮಲವಂತಿಗೆ ಶಕ್ತಿ ಕೇಂದ್ರ ಅಧ್ಯಕ್ಷ ಮಧುಸೂಧನ್ ಮಲ್ಲ, ಪಂಚಾಯತ್ ಉಪಾಧ್ಯಕ್ಷ ರೋಹಿಣಿ ಜಯವರ್ಮ, ಬೂತ್ ಸಮಿತಿಯ ಅಧ್ಯಕ್ಷರುಗಳಾದ ಗಣೇಶ್ ಗೌಡ, ರಾಧಾಕೃಷ್ಣ ನಡುಮಜಲು, ಅಶೋಕ್ ಕಡ್ತಿಕುಮೇರು, ಕಾರ್ಯದರ್ಶಿಗಳಾದ ಸತೀಶ್ ಮ್. ಕೆ, ಪುರಂದರ ನಂದಿಕಾಡು, ವಿನಯ ಚಂದ್ರ ಕಾಂಜಾನು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಜಯಂತ ಹೆಗ್ಡೆ ಬಿಜೆಪಿ ಗೀತೆ ಹಾಡುವ ಮೂಲಕ ಕಾರ್ಯಕ್ರಮ ಆರಂಭಗೊಂಡು, ಉಮೇಶ್ ಮಾಲೂರು ಸ್ವಾಗತಿಸಿ ನಿರ್ವಹಿಸಿದರು.

Related posts

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರನ್ನು ಭೇಟಿ ಮಾಡಿದ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿಗಳು

Suddi Udaya

ಮೇ 25: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ “ಯಶೋ-ವಿಜಯ”, ಬದುಕು-ನೆನಪು-ಸ್ಮರಣೆ

Suddi Udaya

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya
error: Content is protected !!