25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಮಿತ್ತಬಾಗಿಲು : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 10 ರಂದು ನಡೆದ ಮಿತ್ತಬಾಗಿಲು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆ ಕುಕ್ಕಾವು ಶ್ರೀ ಸದಾಶಿವೇಶ್ವರ ದೇವಸ್ಥಾನ ವಠಾರ ದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ವಾಸುದೇವ ರಾವ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಯುವ ವಕೀಲರಾದ ಯತೀಶ್ ಪಣೆಕ್ಕರ, ಮಂಡಲ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್, ವೃಷಾಂಕ್ ಖಾಡಿಲ್ಕರ್ ಬೈಠಕ್ ನೀಡಿದರು. ಲಾಯಿಲ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಅರವಿಂದ್ ಲಾಯಿಲ, ರೈತಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ ನಾವೂರು, ಮಂಡಲ ಉಪಾಧ್ಯಕ್ಷ ಅಭ್ಯಾಸ ವರ್ಗ ಸಂಚಾಲಕ ಕೊರಗಪ್ಪ ಗೌಡ ಚಾರ್ಮಾಡಿ, ಪ್ರಭಾರಿ ಗಿರೀಶ್ ಡೊಂಗ್ರೆ, ಮಿತ್ತಬಾಗಿಲು ಪಂಚಾಯತ್ ಅಧ್ಯಕ್ಷ ವಿನಯ ಚಂದ್ರ, ಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
error: Content is protected !!