23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

ಶಿರ್ಲಾಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಯುವ ಬಿಲ್ಲವ ವೇದಿಕೆ ಬಿಲ್ಲವ ಮಹಿಳಾ ವೇದಿಕೆ ಯುವ ವಾಹಿನಿ ಸಂಚಲನ ಸಮಿತಿ ಶಿರ್ಲಾಲು ಕರಂಬಾರು ಇದರ ನೇತೃತ್ವದಲ್ಲಿ ಆಟಿದ ಅಟಿಲ್ ಕಾರ್ಯಕ್ರಮವು ಶಿರ್ಲಾಲು ಸಿಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಸದಾಶಿವ ಪೂಜಾರಿ ಊರ ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಹಾಗೂ ಸಂಘದ ಮುಂದಿನ ಸೇವಾ ಚಟುವಟಿಕೆಗಳ ಬಗ್ಗೆ ತಿಳಿಸಿ ಎಲ್ಲರ ಸಹಕಾರ ಕೇಳಿದರು.
ವೇದಿಕೆಯಲ್ಲಿ ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಎಂ.ಕೆ ಪ್ರಸಾದ್ ಮಾತನಾಡಿ ಆಟಿಯ ಸಂಪ್ರದಾಯ ಆಚರಣೆಗಳನ್ನು ತಿಳಿಸಿದರು.

ವೇದಿಕೆಯಲ್ಲಿ ಶಿರ್ಲಾಲು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜ್ಞಾನೇಶ್ ಪೂಜಾರಿ ಕಟ್ಟ ಹಾಗೂ ಯುವವಾಹಿನಿ ಸಂಚಲನ ಸಮಿತಿ ಶಿರ್ಲಾಲು ಅಧ್ಯಕ್ಷ ಶಶಿಕಾಂತ್ ಪೊಯ್ಯೇದಂಡ ಮತ್ತು ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶೋಭಾ ಗೋಣಗುರಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ವಜಾತಿ ಬಾಂಧವರು ತಮ್ಮ ಮನೆಯಲ್ಲಿ ಅಟಿಯ ತಿಂಗಳಲ್ಲಿ ಮಾಡುವ ಸುಮಾರು 60 ವಿವಿಧ ಬಗೆಯ ತಿಂಡಿ ತಿನಸುಗಳನ್ನು ತಯಾರಿ ಮಾಡಿದ್ದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಮನರಂಜನೆಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಾಡು ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಆಟೋಟ ಸ್ಪರ್ಧೆಯನ್ನು ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ಪಾಲನೆ ನೆರವೇರಿಸಿದರು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಹರೀಶ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಕರ್ದೋಟ್ಟು ಸ್ವಾಗತಿಸಿ, ಮಹಿಳಾ ಬಿಲ್ಲವ ವೇದಿಕೆಯ ಕಾರ್ಯದರ್ಶಿ ರೇಖಾ ನೇತ್ರಾಬೈಲ್ ಧನ್ಯವಾದವಿತ್ತರು.

Related posts

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ: ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿಗೆ ನಿರ್ವಹಣಾ ಮೇಲ್ವಿಚಾರಕರು ಬೇಕಾಗಿದ್ದಾರೆ

Suddi Udaya
error: Content is protected !!