ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಗುರುವಾಯನಕೆರೆಯಲ್ಲಿ ಮೂರು ವಾಹನಗಳಿಗೆ ತಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನಿಂತಿದ್ದ ಸಂಚಾರಿ ಠಾಣಾ ಪೊಲೀಸರು ತಕ್ಷಣ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಅದರಲ್ಲಿದ್ದ ಮೂವರಲ್ಲಿ ಇಬ್ಬರು ಪರಾರಿಯಾಗಿದ್ದು. ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು,ಹಿಂದೂ ಮುಖಂಡರು ಸೇರಿದ್ದಾರೆ.

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರಿಗೆ ಎರಡೆರಡು ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಅಕ್ರಮವಾಗಿ ಗೋ ಕಳ್ಳತನ ಮಾಡಿ ಸಾಗಾಟ ನಡೆಸಲಾಗುತ್ತಿತ್ತು.ಮೂರು ದನಗಳ ಪೈಕಿ ಎರಡು ದಿನಗಳು ಎದ್ದು ನಿಂತಿದ್ದು ಒಂದು ದನ ನೋವಿನಿಂದ ನರಳುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಸುಬ್ಬಾಪುರ್ ಮಠ ಭೇಟಿ ನೀಡಿದ್ದಾರೆ.

Related posts

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya
error: Content is protected !!