July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಗುರುವಾಯನಕೆರೆಯಲ್ಲಿ ಮೂರು ವಾಹನಗಳಿಗೆ ತಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನಿಂತಿದ್ದ ಸಂಚಾರಿ ಠಾಣಾ ಪೊಲೀಸರು ತಕ್ಷಣ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಅದರಲ್ಲಿದ್ದ ಮೂವರಲ್ಲಿ ಇಬ್ಬರು ಪರಾರಿಯಾಗಿದ್ದು. ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು,ಹಿಂದೂ ಮುಖಂಡರು ಸೇರಿದ್ದಾರೆ.

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರಿಗೆ ಎರಡೆರಡು ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಅಕ್ರಮವಾಗಿ ಗೋ ಕಳ್ಳತನ ಮಾಡಿ ಸಾಗಾಟ ನಡೆಸಲಾಗುತ್ತಿತ್ತು.ಮೂರು ದನಗಳ ಪೈಕಿ ಎರಡು ದಿನಗಳು ಎದ್ದು ನಿಂತಿದ್ದು ಒಂದು ದನ ನೋವಿನಿಂದ ನರಳುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಸುಬ್ಬಾಪುರ್ ಮಠ ಭೇಟಿ ನೀಡಿದ್ದಾರೆ.

Related posts

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ಮಹಾಶಿವರಾತ್ರಿ ಯಾತ್ರಿಕರಿಗೆ ಉಚಿತ ಮಜ್ಜಿಗೆ ವಿತರಣೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya
error: Content is protected !!