25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಊರವರು ಹಾಗೂ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿದೆ.

ಚಾರ್ಮಾಡಿ ಕಡೆಯಿಂದ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ಗುರುವಾಯನಕೆರೆಯಲ್ಲಿ ಮೂರು ವಾಹನಗಳಿಗೆ ತಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ನಿಂತಿದ್ದ ಸಂಚಾರಿ ಠಾಣಾ ಪೊಲೀಸರು ತಕ್ಷಣ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಅದರಲ್ಲಿದ್ದ ಮೂವರಲ್ಲಿ ಇಬ್ಬರು ಪರಾರಿಯಾಗಿದ್ದು. ಚಾಲಕನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು,ಹಿಂದೂ ಮುಖಂಡರು ಸೇರಿದ್ದಾರೆ.

ಗುರುವಾಯನಕೆರೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರಿಗೆ ಎರಡೆರಡು ನಂಬರ್ ಪ್ಲೇಟ್ ಗಳನ್ನು ಅಳವಡಿಸಿ ಅಕ್ರಮವಾಗಿ ಗೋ ಕಳ್ಳತನ ಮಾಡಿ ಸಾಗಾಟ ನಡೆಸಲಾಗುತ್ತಿತ್ತು.ಮೂರು ದನಗಳ ಪೈಕಿ ಎರಡು ದಿನಗಳು ಎದ್ದು ನಿಂತಿದ್ದು ಒಂದು ದನ ನೋವಿನಿಂದ ನರಳುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಹಾಗೂ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಸುಬ್ಬಾಪುರ್ ಮಠ ಭೇಟಿ ನೀಡಿದ್ದಾರೆ.

Related posts

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya
error: Content is protected !!