September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.

ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಎಸ್ಐಟಿ ತನ್ನ ತನಿಖೆಯ ಮಧ್ಯಾಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ತಿಳಿಸಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya
error: Content is protected !!