22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನಾಮಿಕ ವ್ಯಕ್ತಿಯ ದೂರಿನಂತೆ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ತನಿಖೆಗಾಗಿ ಸರ್ಕಾರ ಎಸ್ಐಟಿಯನ್ನು ರಚಿಸಿದ್ದು.ನಿಷ್ಪಕ್ಷಪಾತವಾಗಿ ತನಿಖೆಯೂ ಕೂಡ ನಡೆಯುತ್ತಿದೆ.

ಎಸ್ಐಟಿ ತನಿಖೆಯನ್ನು ನಡೆಸುತ್ತಿರುವ ಸಂದರ್ಭದಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರ ಮತ್ತು ವ್ಯಕ್ತಿಗತವಾಗಿ ಮೌಖಿಕ ಮತ್ತು ಸಾಮಾಜಿಕ ಜಾಲತಾಣದ ಮುಖಾಂತರ ಗುರಿಯಾಗಿಸಿ ಅವಹೇಳನಕಾರಿಯಾಗಿ ಬಿಂಬಿಸುವುದು ನಾಗರಿಕ ಸಮಾಜಕ್ಕೆ ಶೋಭೆ ತರುವಂತದ್ದಲ್ಲ. ತನಿಖೆಯೂ ಯಾರ ಪರವೂ ಅಲ್ಲ ವಿರೋಧವೂ ಅಲ್ಲ , ಈ ನೆಲದ ಕಾನೂನು ಪ್ರತಿಯೊಬ್ಬ ಪ್ರಜೆಯ ಗಣತೆ, ಗೌರವವನ್ನು ಕಾಪಾಡುತ್ತದೆ.

ಸಾಮಾಜಿಕ ಜಾಲತಾಣದಲ್ಲಿ ದ್ವೇಷ ಹರಡುತ್ತಿರುವವರ ವಿರುದ್ಧವು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಎಸ್ಐಟಿ ತನ್ನ ತನಿಖೆಯ ಮಧ್ಯಾಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸಾರ್ವಜನಿಕ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಕೆ.ಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ತಿಳಿಸಿದ್ದಾರೆ.

Related posts

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!