24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಆ. 15,16 ರಂದು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ಆ.15 ರಂದು ಪೂರ್ವಾಹ್ನ ಗಂಟೆ 9:00ಕ್ಕೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 2.00ಕ್ಕೆ ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಕರ್ನಲ್ ನಿತಿನ್ ಭಿಡೆ ಭಾರತೀಯ ಭೂ ಸೇನೆ, ಶ್ರೀಮತಿ ರಾಜೇಶ್ವರಿ ಎಚ್ ಎಚ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ರಕ್ಷಿತ್ ಶಿವರಾಂ ಅಧ್ಯಕ್ಷರು, ಬೆಸ್ಟ್‌ ಫೌಂಡೇಶನ್ , ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಶಾಸಕರು, ಬಿ ಅನಂತರಾಜ್ ಜೈನ್‌ ಮಾಸ್ಟರ್ ವಾರೆಂಟ್ ಆಫೀಸರ್ ಭಾರತೀಯ ವಾಯು ಸೇನೆ , ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಲಿದ್ದಾರೆ.

ಆ. 16 ರಂದು ರಕ್ಷಕ ನಮನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ರವರು ಆಶೀರ್ವಚನ ನೀಡಲಿದ್ದಾರೆ .

ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶ್ರಾಂತ ಶಿಕ್ಷಕರು ಹಾಗೂ ಖ್ಯಾತ ವಾಗ್ಮಿಗಳು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ಮೇಜರ್ ಜನರಲ್ ಎಂ ವಿ ಭಟ್ ಭಾರತೀಯ ಭೂ ಸೇನೆ, ರವಿಶಂಕರ್ ಭಟ್ ಸಮೂಹ ಸಂಪಾದಕರು ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಬೆಂಗಳೂರು, ಕಿಶೋರ್ ಕುಮಾರ್ ಬೊಟ್ಯಾಡಿ ವಿಧಾನ ಪರಿಷತ್ ಶಾಸಕರು, ಬಿ ಎಂ ತಿರುಮಲೇಶ್ ಮುಖ್ಯ ಅಗ್ನಿಶಾಮಕ ಅಧಿಕಾರಿ, ಮಂಗಳೂರು ಭಾಗವಹಿಸಲಿರುವರು.

Related posts

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya
error: Content is protected !!