23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 36ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ. 17ರಂದು ಮಡಂತ್ಯಾರು ಗಣಪತಿ ಮಂಟಪದ ಸಿಂಧೂರ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.

ಶ್ರೀ ಕ್ಷೇತ್ರ ಬಳ್ಳಮಂಜದ ಆನುವಂಶೀಯ ಆಡಳಿತ ಮೊಕ್ತೇಸರರು ಡಾ| ಹರ್ಷ ಸಂಪಿಗೆತ್ತಾಯ ಉದ್ಘಾಟಿಸಲಿರುವರು.
ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರು ನಾಗೇಶ್ ಪ್ರಭು ಅಧ್ಯಕ್ಷತೆಯನ್ನು ವಹಿಸಲಿರುವರು. ಕಿರಣ್ ಕುಮಾರ್ ಮಂಜಿಲ ‘ಕಾಮಧೇನು’ ಆರಂಬೋಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಸಮಾರೋಪ ಸಮಾರಂಭದಲ್ಲಿ ಗುರುನಮನ ಕಾರ್ಯಕ್ರಮ ನಡೆಯಲಿದ್ದು ಸಂಸದ ಕ್ಯಾ| ಬ್ರಿಜೇಶ್ ಚೌಟ ಗುರುನಮನ ನೆರವೇರಿಸಲಿರುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಉದ್ಯಮಿ ಸತೀಶ್‌ ಶೆಟ್ಟಿ, ಬೋಳದಗುತ್ತು, ನಿಖಿಲ್ ಪಿ. ಬಂಗೇರ, ‘ಪ್ರಕೃತಿ’, ಮದ್ದಡ್ಕ, ಆಕಾಶ್ ಮಾಣೂರು ಭಾಗವಹಿಸಲಿರುವರು.

ವಿವಿಧ ಆಟೋಟಗಳು: ಬೈಕ್ ರೇಸ್, ತ್ರೋಬಾಲ್, ಕ್ರಾಸ್ ಕಂಟ್ರಿ, ಹಗ್ಗ ಜಗ್ಗಾಟ ,ಶ್ರೀ ಕೃಷ್ಣ ವೇಷ, ರೀಲ್ಸ್ ಸ್ಪರ್ಧೆ, ಅಡಿಕೆ ಮರ ಏರುವುದು, ಗೋಣಿಚೀಲ ಓಟ, ರಂಗೋಲಿ, ಸ್ಲೋ ಸೈಕಲ್ ಬ್ಯಾಲೆನ್ಸ್, ಮೊಸರು ಕುಡಿಕೆ, ಗೋವಿಂದ ಸ್ಪರ್ಧೆ ಏರ್ಪಡಿಸಲಾಗಿದೆ.

ಸಂಜೆ ಗಂಟೆ 5ರಿಂದ ಮಡಂತ್ಯಾರು ಸೇವಾ ಸಹಕಾರಿ ಬ್ಯಾಂಕಿನ ಬಳಿಯಿಂದ ಪ್ರಸಿದ್ಧ ಕುಣಿತ ಭಜನಾ ತಂಡಗಳೊಂದಿಗೆ ಶ್ರೀ ಕೃಷ್ಣನ ವೈಭವದ ಮೆರವಣಿಗೆ ಹಾಗೂ. ರಾತ್ರಿ 8 ರಿಂದ ನೃತ್ಯ ವೈಭವ ಜರಗಲಿರುವುದು ಎಂದು ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ತಿಳಿಸಿದ್ದಾರೆ.

Related posts

ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

“ಲೋಕಾಯುಕ್ತ ಜನ ಸಂಪರ್ಕ ಸಭೆ: ಗ್ರಾಮ ಮಟ್ಟದಲ್ಲಿ ಭ್ರಷ್ಟಚಾರದ ಕುರಿತು ಜಾಗೃತಿ-ಲೋಕಾಯುಕ್ತ ಅಧೀಕ್ಷಕ ಕುಮಾರಚಂದ್ರ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!