September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ನುಗ್ಗಿದ್ದ ಕಳ್ಳರು ಗಾದ್ರೇಜ್‌ನ ಲಾಕರ್ ನಲ್ಲಿ ಇದ್ದ ರೂ. 1.30 ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌ ಮನೆ ನಿವಾಸಿ ಕುಂಞಿ ಕೃಷ್ಣನ್‌ ಎಂಬವರ ಪುತ್ರ ನಿಧೀಶ್‌ ವಿ.ಕೆ ಎಂಬವರ ದೂರಿನಂತೆ ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌ ಮನೆ ಎಂಬಲ್ಲಿ ತಂದೆ ಕುಂಞಿ ಕೃಷ್ಣನ್‌ ಒಬ್ಬರೇ ಇದ್ದು ಆ.12 ರಂದು ಬೆಳಿಗ್ಗೆ 9 ಗಂಟೆಗೆ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು.ಮಧ್ಯಾಹ್ನ 1ಗಂಟೆಯ ಸುಮಾರಿಗೆ ಊಟಕ್ಕೆಂದು ಮನೆಗೆ ಬಂದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ಇದ್ದ ಗಾದ್ರೇಜ್‌ ನಲ್ಲಿಟ್ಟಿದ್ದ ಬಟ್ಟೆಗಳು ಚೆಲ್ಲಾಪಿಲ್ಲಯಾಗಿದ್ದು, ಲಾಕರ್‌ ನ ಬಾಕ್ಸ್‌ ನಲ್ಲಿದ್ದ ಚಿನ್ನದ ಸರ ಕಳವಾಗಿರುವುದು ಬೆಳಕಿಗೆ ಬಂದಿತ್ತು.


ಕೂಡಲೇ ಅವರು ಮಂಗಳೂರಿನಲ್ಲಿದ್ದ ಪುತ್ರ ನಿಧೀಶ್‌ ಗೆ ತಿಳಿಸಿದರು. ನಿಧೀಶ್ ಮಂಗಳೂರಿನಿಂದ ಹೊರಟು ಮನೆಗೆ ಬಂದು ನೋಡಿದಾಗ ಮನೆಯ ಬಾಗಲಿನ ಬೀಗವನ್ನು ಯಾರೋ ಕಳ್ಳರು ಯಾವುದೋ ಆಯುಧದಿಂದ ಮೀಟಿ ತೆಗೆದು ಮನೆಯೊಳಗೆ ಪ್ರವೇಶಿಸಿ ಗಾದ್ರೇಜ್‌ ನ ಲಾಕರ್‌ ನ ಒಳಗೆ ಇ ಟ್ಟಿದ್ದ ಅಂದಾಜು ರೂ,1,30,000 ಮೌಲ್ಯದ ಸುಮಾರು 2 ಪವನ್‌ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಬಾಕ್ಸ್‌ ನ್ನು ಅಲ್ಲೇ ಬಿಟ್ಟು ಹೋಗಿರುವುದಾಗಿದೆ ಬೆಳಕಿಗೆ ಬಂದಿತ್ತು.
ಈ ಬಗ್ಗೆ ನಿಧೀಶ್‌ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ ಅ.ಕ್ರ 52/2025 ಕಲಂ: 331(3), 305 ಬಿಎನ್ಎಸ್-2023ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ನಿಡ್ಲೆಯ ಪ್ರತಿಷ್ಠಿತ ಸಂಸ್ಥೆ ಅಗ್ರಿಲೀಫ್ ಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!