July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮಂಗಳೂರು ಎಂದು ಬದಲಾವಣೆಗೆ ಆಗ್ರಹ ಮಾಡುತ್ತಿದ್ದಾರೆ. ಮಂಗಳೂರು ಅನ್ನೋದು ಒಂದು ಬ್ರಾಂಡ್ ಆಗಿರುವ ಹೆಸರು. ನಾವು ಎಲ್ಲೆಲ್ಲಾ ವ್ಯಾಪಾರ ಮಾಡುತ್ತೇವೆ, ಎಲ್ಲೆಲ್ಲಾ ಇದ್ದೇವೆ, ನಾವು ಮಂಗಳೂರಿನವರು ಎಂದು ಗುರುತಿಸಿಕೊಂಡವರು. 1931ರಿಂದ ಎಸ್.ಯು.ಪಣಿಯಾಡಿ ಅವರ ಕಾಲದಿಂದಲೂ ಮರುನಾಮಕರಣ ಹೋರಾಟ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸ್ಥಳಗಳನ್ನು ಮಂಗಳೂರು ಹೆಸರಲ್ಲಿ ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯೂ ಮಂಗಳೂರು ಸಮಾಚಾರ, ಮಂಗಳೂರು ಎಂಬ ಹೆಸರು ಜಗಜ್ಜಾಹಿರವಾಗಿರುವಂಥ ಹೆಸರಾಗಿದೆ” ಎಂದು ವಿವರಿಸಿದರು.

Related posts

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಉಜಿರೆ ಶ್ರೀ ಧ. ಮಂ. ಪಾಲಿಟೆಕ್ನಿಕ್ ರಾಷ್ಟೀಯ ಸೇವಾ ಯೋಜನೆ ಘಟಕ , ಯುವ ರೆಡ್ ಕ್ರಾಸ್ ಘಟಕ, ರೋಟರಿ ಕ್ಲಬ್ ಬೆಳ್ತಂಗಡಿ ಸಹ ಭಾಗಿತ್ವದಲ್ಲಿ ಯುವ ಜನತೆ ಮತ್ತು ಆರೋಗ್ಯದ ಉಪನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya
error: Content is protected !!