July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಯಾಗಿ ಶ್ರೀ ಧ ಮ ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ಡಾ .ರಜತ ಪಿ. ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ ,ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ , ಶಾಲಾ ವಿದ್ಯಾರ್ಥಿನಿ ಕು| ಸಾನ್ವಿತ ಹಾಗೂ ಸಮನ್ವೀ ಸ್ವಾಗತಿಸಿದರು . ಕುಮಾರಿ ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿ, ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಸಹಕರಿಸಿದರು.

Related posts

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!