ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಆ. 15,16 ರಂದು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.
ಆ.15 ರಂದು ಪೂರ್ವಾಹ್ನ ಗಂಟೆ 9:00ಕ್ಕೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 2.00ಕ್ಕೆ ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.
ಕರ್ನಲ್ ನಿತಿನ್ ಭಿಡೆ ಭಾರತೀಯ ಭೂ ಸೇನೆ, ಶ್ರೀಮತಿ ರಾಜೇಶ್ವರಿ ಎಚ್ ಎಚ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ರಕ್ಷಿತ್ ಶಿವರಾಂ ಅಧ್ಯಕ್ಷರು, ಬೆಸ್ಟ್ ಫೌಂಡೇಶನ್ , ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಶಾಸಕರು, ಬಿ ಅನಂತರಾಜ್ ಜೈನ್ ಮಾಸ್ಟರ್ ವಾರೆಂಟ್ ಆಫೀಸರ್ ಭಾರತೀಯ ವಾಯು ಸೇನೆ , ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಲಿದ್ದಾರೆ.
ಆ. 16 ರಂದು ರಕ್ಷಕ ನಮನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ರವರು ಆಶೀರ್ವಚನ ನೀಡಲಿದ್ದಾರೆ .
ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶ್ರಾಂತ ಶಿಕ್ಷಕರು ಹಾಗೂ ಖ್ಯಾತ ವಾಗ್ಮಿಗಳು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.
ಮೇಜರ್ ಜನರಲ್ ಎಂ ವಿ ಭಟ್ ಭಾರತೀಯ ಭೂ ಸೇನೆ, ರವಿಶಂಕರ್ ಭಟ್ ಸಮೂಹ ಸಂಪಾದಕರು ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಬೆಂಗಳೂರು, ಕಿಶೋರ್ ಕುಮಾರ್ ಬೊಟ್ಯಾಡಿ ವಿಧಾನ ಪರಿಷತ್ ಶಾಸಕರು, ಬಿ ಎಂ ತಿರುಮಲೇಶ್ ಮುಖ್ಯ ಅಗ್ನಿಶಾಮಕ ಅಧಿಕಾರಿ, ಮಂಗಳೂರು ಭಾಗವಹಿಸಲಿರುವರು.











