September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಆ. 15,16 ರಂದು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ಆ.15 ರಂದು ಪೂರ್ವಾಹ್ನ ಗಂಟೆ 9:00ಕ್ಕೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 2.00ಕ್ಕೆ ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಕರ್ನಲ್ ನಿತಿನ್ ಭಿಡೆ ಭಾರತೀಯ ಭೂ ಸೇನೆ, ಶ್ರೀಮತಿ ರಾಜೇಶ್ವರಿ ಎಚ್ ಎಚ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ರಕ್ಷಿತ್ ಶಿವರಾಂ ಅಧ್ಯಕ್ಷರು, ಬೆಸ್ಟ್‌ ಫೌಂಡೇಶನ್ , ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಶಾಸಕರು, ಬಿ ಅನಂತರಾಜ್ ಜೈನ್‌ ಮಾಸ್ಟರ್ ವಾರೆಂಟ್ ಆಫೀಸರ್ ಭಾರತೀಯ ವಾಯು ಸೇನೆ , ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಲಿದ್ದಾರೆ.

ಆ. 16 ರಂದು ರಕ್ಷಕ ನಮನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ರವರು ಆಶೀರ್ವಚನ ನೀಡಲಿದ್ದಾರೆ .

ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶ್ರಾಂತ ಶಿಕ್ಷಕರು ಹಾಗೂ ಖ್ಯಾತ ವಾಗ್ಮಿಗಳು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ಮೇಜರ್ ಜನರಲ್ ಎಂ ವಿ ಭಟ್ ಭಾರತೀಯ ಭೂ ಸೇನೆ, ರವಿಶಂಕರ್ ಭಟ್ ಸಮೂಹ ಸಂಪಾದಕರು ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಬೆಂಗಳೂರು, ಕಿಶೋರ್ ಕುಮಾರ್ ಬೊಟ್ಯಾಡಿ ವಿಧಾನ ಪರಿಷತ್ ಶಾಸಕರು, ಬಿ ಎಂ ತಿರುಮಲೇಶ್ ಮುಖ್ಯ ಅಗ್ನಿಶಾಮಕ ಅಧಿಕಾರಿ, ಮಂಗಳೂರು ಭಾಗವಹಿಸಲಿರುವರು.

Related posts

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಮದ್ದಡ್ಕ: 15 ನೇ ವರ್ಷದ ಗಣೇಶೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!