23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025 ಭಾರತೀಯ ಸೇನೆ ಹಾಗೂ ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಗೌರವಾರ್ಪಣೆ, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವು ಆ. 15,16 ರಂದು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಲಿದೆ.

ಆ.15 ರಂದು ಪೂರ್ವಾಹ್ನ ಗಂಟೆ 9:00ಕ್ಕೆ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 2.00ಕ್ಕೆ ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.

ಕರ್ನಲ್ ನಿತಿನ್ ಭಿಡೆ ಭಾರತೀಯ ಭೂ ಸೇನೆ, ಶ್ರೀಮತಿ ರಾಜೇಶ್ವರಿ ಎಚ್ ಎಚ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ರಕ್ಷಿತ್ ಶಿವರಾಂ ಅಧ್ಯಕ್ಷರು, ಬೆಸ್ಟ್‌ ಫೌಂಡೇಶನ್ , ಪ್ರತಾಪ್ ಸಿಂಹ ನಾಯಕ್ ವಿಧಾನ ಪರಿಷತ್ ಶಾಸಕರು, ಬಿ ಅನಂತರಾಜ್ ಜೈನ್‌ ಮಾಸ್ಟರ್ ವಾರೆಂಟ್ ಆಫೀಸರ್ ಭಾರತೀಯ ವಾಯು ಸೇನೆ , ಧಾರ್ಮಿಕ ಮುಖಂಡರು ಕಿರಣ್ ಚಂದ್ರ ಪುಷ್ಪಗಿರಿ ಭಾಗವಹಿಸಲಿದ್ದಾರೆ.

ಆ. 16 ರಂದು ರಕ್ಷಕ ನಮನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಶ್ರೀ ಜೈನ ಮಠ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಡಾ. ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ರವರು ಆಶೀರ್ವಚನ ನೀಡಲಿದ್ದಾರೆ .

ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶ್ರಾಂತ ಶಿಕ್ಷಕರು ಹಾಗೂ ಖ್ಯಾತ ವಾಗ್ಮಿಗಳು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ಮೇಜರ್ ಜನರಲ್ ಎಂ ವಿ ಭಟ್ ಭಾರತೀಯ ಭೂ ಸೇನೆ, ರವಿಶಂಕರ್ ಭಟ್ ಸಮೂಹ ಸಂಪಾದಕರು ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಬೆಂಗಳೂರು, ಕಿಶೋರ್ ಕುಮಾರ್ ಬೊಟ್ಯಾಡಿ ವಿಧಾನ ಪರಿಷತ್ ಶಾಸಕರು, ಬಿ ಎಂ ತಿರುಮಲೇಶ್ ಮುಖ್ಯ ಅಗ್ನಿಶಾಮಕ ಅಧಿಕಾರಿ, ಮಂಗಳೂರು ಭಾಗವಹಿಸಲಿರುವರು.

Related posts

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ: ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!