25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 36ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ. 17ರಂದು ಮಡಂತ್ಯಾರು ಗಣಪತಿ ಮಂಟಪದ ಸಿಂಧೂರ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.

ಶ್ರೀ ಕ್ಷೇತ್ರ ಬಳ್ಳಮಂಜದ ಆನುವಂಶೀಯ ಆಡಳಿತ ಮೊಕ್ತೇಸರರು ಡಾ| ಹರ್ಷ ಸಂಪಿಗೆತ್ತಾಯ ಉದ್ಘಾಟಿಸಲಿರುವರು.
ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರು ನಾಗೇಶ್ ಪ್ರಭು ಅಧ್ಯಕ್ಷತೆಯನ್ನು ವಹಿಸಲಿರುವರು. ಕಿರಣ್ ಕುಮಾರ್ ಮಂಜಿಲ ‘ಕಾಮಧೇನು’ ಆರಂಬೋಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಸಮಾರೋಪ ಸಮಾರಂಭದಲ್ಲಿ ಗುರುನಮನ ಕಾರ್ಯಕ್ರಮ ನಡೆಯಲಿದ್ದು ಸಂಸದ ಕ್ಯಾ| ಬ್ರಿಜೇಶ್ ಚೌಟ ಗುರುನಮನ ನೆರವೇರಿಸಲಿರುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಉದ್ಯಮಿ ಸತೀಶ್‌ ಶೆಟ್ಟಿ, ಬೋಳದಗುತ್ತು, ನಿಖಿಲ್ ಪಿ. ಬಂಗೇರ, ‘ಪ್ರಕೃತಿ’, ಮದ್ದಡ್ಕ, ಆಕಾಶ್ ಮಾಣೂರು ಭಾಗವಹಿಸಲಿರುವರು.

ವಿವಿಧ ಆಟೋಟಗಳು: ಬೈಕ್ ರೇಸ್, ತ್ರೋಬಾಲ್, ಕ್ರಾಸ್ ಕಂಟ್ರಿ, ಹಗ್ಗ ಜಗ್ಗಾಟ ,ಶ್ರೀ ಕೃಷ್ಣ ವೇಷ, ರೀಲ್ಸ್ ಸ್ಪರ್ಧೆ, ಅಡಿಕೆ ಮರ ಏರುವುದು, ಗೋಣಿಚೀಲ ಓಟ, ರಂಗೋಲಿ, ಸ್ಲೋ ಸೈಕಲ್ ಬ್ಯಾಲೆನ್ಸ್, ಮೊಸರು ಕುಡಿಕೆ, ಗೋವಿಂದ ಸ್ಪರ್ಧೆ ಏರ್ಪಡಿಸಲಾಗಿದೆ.

ಸಂಜೆ ಗಂಟೆ 5ರಿಂದ ಮಡಂತ್ಯಾರು ಸೇವಾ ಸಹಕಾರಿ ಬ್ಯಾಂಕಿನ ಬಳಿಯಿಂದ ಪ್ರಸಿದ್ಧ ಕುಣಿತ ಭಜನಾ ತಂಡಗಳೊಂದಿಗೆ ಶ್ರೀ ಕೃಷ್ಣನ ವೈಭವದ ಮೆರವಣಿಗೆ ಹಾಗೂ. ರಾತ್ರಿ 8 ರಿಂದ ನೃತ್ಯ ವೈಭವ ಜರಗಲಿರುವುದು ಎಂದು ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ತಿಳಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಲಾಯಿಲ ಸೈಂಟ್ ಮೆರೀಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya
error: Content is protected !!