25.5 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿ

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

ಉಜಿರೆ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ, ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆ.14 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.

ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ಅಧ್ಯಕ್ಷ ವಿಷ್ಣು ಮರಾಟೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಜರಂಗದಳ ಪ್ರಾಂತ ಬಲೋ ಪಾಸಾನ ಪ್ರಮುಖ್, ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ನರೇಶ್ ರೆಡ್ಡಿ ದಿಕ್ಸೂಚಿ ಭಾಷಣವನ್ನು ನೆರವೇರಿಸಿದರು.

ವೇದಿಕೆಯಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾ0ಚೋಡು, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಉದ್ಯಮಿ ಪದ್ಮನಾಭ ಶೆಟ್ಟಿ ಉಜಿರೆ, ಪ್ರಸಾದ್ ಗೌಡ ಉಜಿರೆ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷರು ಗ್ರಾಮ ಸಮಿತಿ ಉಜಿರೆ, ಗೌರವ್ ಉಜಿರೆ ಭಜರಂಗದಳ ಸಹ ಸಂಯೋಜಕ್ ಬೆಳ್ತಂಗಡಿ ಪ್ರಖಂಡ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಘ ಚಾಲಕ ವಿನಯ್, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಪ್ರಖಂಡ ಕಾರ್ಯದರ್ಶಿ ರಮೇಶ್ ಉಜಿರೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಭಕ್ತರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಶಾರದಾ ಮಂಟಪದಿಂದ ಉಜಿರೆ ಪೇಟೆಯ ವರೆಗೆ ಪಂಜಿನ ಮೆರವಣಿಗೆ ನಡೆಯಿತು. ಸಂತೋಷ ಅತ್ತಾಜೆ ಗೊರಕ್ಷಾ ಪ್ರಮುಕ್, ಬೆಳ್ತಂಗಡಿ ಪ್ರಖಂಡ ಸ್ವಾಗತಿಸಿದರು. ಮೋಹನ್ ಬೆಳ್ತಂಗಡಿ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ ನಿರೂಪಿಸಿ ವಂದಿಸಿದರು.

Related posts

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya
error: Content is protected !!