22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಹಾಡು ಹಗಲೇ ಮನೆಯೊಂದರ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ನುಗ್ಗಿದ್ದ ಕಳ್ಳರು ಗಾದ್ರೇಜ್‌ನ ಲಾಕರ್ ನಲ್ಲಿ ಇದ್ದ ರೂ. 1.30 ಲಕ್ಷದ ಚಿನ್ನಾಭರಣ ಕಳವುಗೈದ ಘಟನೆ ಆ.12ರಂದು ತೋಟತ್ತಾಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಈ ಬಗ್ಗೆ ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌ ಮನೆ ನಿವಾಸಿ ಕುಂಞಿ ಕೃಷ್ಣನ್‌ ಎಂಬವರ ಪುತ್ರ ನಿಧೀಶ್‌ ವಿ.ಕೆ ಎಂಬವರ ದೂರಿನಂತೆ ತೋಟತ್ತಾಡಿ ಗ್ರಾಮದ ವೆನ್ನಾಯಿಲ್‌ ಮನೆ ಎಂಬಲ್ಲಿ ತಂದೆ ಕುಂಞಿ ಕೃಷ್ಣನ್‌ ಒಬ್ಬರೇ ಇದ್ದು ಆ.12 ರಂದು ಬೆಳಿಗ್ಗೆ 9 ಗಂಟೆಗೆ ಮನೆಗೆ ಬೀಗ ಹಾಕಿ ಕೂಲಿ ಕೆಲಸಕ್ಕೆ ಹೋಗಿದ್ದರು.ಮಧ್ಯಾಹ್ನ 1ಗಂಟೆಯ ಸುಮಾರಿಗೆ ಊಟಕ್ಕೆಂದು ಮನೆಗೆ ಬಂದಾಗ ಮನೆಯ ಬಾಗಿಲ ಬೀಗವನ್ನು ಮುರಿದು ಮನೆಯೊಳಗಡೆ ಇದ್ದ ಗಾದ್ರೇಜ್‌ ನಲ್ಲಿಟ್ಟಿದ್ದ ಬಟ್ಟೆಗಳು ಚೆಲ್ಲಾಪಿಲ್ಲಯಾಗಿದ್ದು, ಲಾಕರ್‌ ನ ಬಾಕ್ಸ್‌ ನಲ್ಲಿದ್ದ ಚಿನ್ನದ ಸರ ಕಳವಾಗಿರುವುದು ಬೆಳಕಿಗೆ ಬಂದಿತ್ತು.


ಕೂಡಲೇ ಅವರು ಮಂಗಳೂರಿನಲ್ಲಿದ್ದ ಪುತ್ರ ನಿಧೀಶ್‌ ಗೆ ತಿಳಿಸಿದರು. ನಿಧೀಶ್ ಮಂಗಳೂರಿನಿಂದ ಹೊರಟು ಮನೆಗೆ ಬಂದು ನೋಡಿದಾಗ ಮನೆಯ ಬಾಗಲಿನ ಬೀಗವನ್ನು ಯಾರೋ ಕಳ್ಳರು ಯಾವುದೋ ಆಯುಧದಿಂದ ಮೀಟಿ ತೆಗೆದು ಮನೆಯೊಳಗೆ ಪ್ರವೇಶಿಸಿ ಗಾದ್ರೇಜ್‌ ನ ಲಾಕರ್‌ ನ ಒಳಗೆ ಇ ಟ್ಟಿದ್ದ ಅಂದಾಜು ರೂ,1,30,000 ಮೌಲ್ಯದ ಸುಮಾರು 2 ಪವನ್‌ ತೂಕದ ಚಿನ್ನದ ಸರವನ್ನು ಕಳವು ಮಾಡಿಕೊಂಡು ಬಾಕ್ಸ್‌ ನ್ನು ಅಲ್ಲೇ ಬಿಟ್ಟು ಹೋಗಿರುವುದಾಗಿದೆ ಬೆಳಕಿಗೆ ಬಂದಿತ್ತು.
ಈ ಬಗ್ಗೆ ನಿಧೀಶ್‌ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆ ಅ.ಕ್ರ 52/2025 ಕಲಂ: 331(3), 305 ಬಿಎನ್ಎಸ್-2023ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಸವಣಾಲು : ಮಂಜದಬೆಟ್ಟು ನಿವಾಸಿ ನಾರಾಯಣ ಆಚಾರ್ಯ ನಿಧನ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!