25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮಂಗಳೂರು ಎಂದು ಬದಲಾವಣೆಗೆ ಆಗ್ರಹ ಮಾಡುತ್ತಿದ್ದಾರೆ. ಮಂಗಳೂರು ಅನ್ನೋದು ಒಂದು ಬ್ರಾಂಡ್ ಆಗಿರುವ ಹೆಸರು. ನಾವು ಎಲ್ಲೆಲ್ಲಾ ವ್ಯಾಪಾರ ಮಾಡುತ್ತೇವೆ, ಎಲ್ಲೆಲ್ಲಾ ಇದ್ದೇವೆ, ನಾವು ಮಂಗಳೂರಿನವರು ಎಂದು ಗುರುತಿಸಿಕೊಂಡವರು. 1931ರಿಂದ ಎಸ್.ಯು.ಪಣಿಯಾಡಿ ಅವರ ಕಾಲದಿಂದಲೂ ಮರುನಾಮಕರಣ ಹೋರಾಟ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸ್ಥಳಗಳನ್ನು ಮಂಗಳೂರು ಹೆಸರಲ್ಲಿ ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯೂ ಮಂಗಳೂರು ಸಮಾಚಾರ, ಮಂಗಳೂರು ಎಂಬ ಹೆಸರು ಜಗಜ್ಜಾಹಿರವಾಗಿರುವಂಥ ಹೆಸರಾಗಿದೆ” ಎಂದು ವಿವರಿಸಿದರು.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಕೊಕ್ಕಡ: ಪೃಥ್ವಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಬೆಳ್ತಂಗಡಿ: ಸವಣಾಲುವಿನಲ್ಲಿ ಬೋನಿಗೆ ಬಿದ್ದ ಚಿರತೆ

Suddi Udaya
error: Content is protected !!