23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಯಾಗಿ ಶ್ರೀ ಧ ಮ ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ಡಾ .ರಜತ ಪಿ. ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ ,ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ , ಶಾಲಾ ವಿದ್ಯಾರ್ಥಿನಿ ಕು| ಸಾನ್ವಿತ ಹಾಗೂ ಸಮನ್ವೀ ಸ್ವಾಗತಿಸಿದರು . ಕುಮಾರಿ ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿ, ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಸಹಕರಿಸಿದರು.

Related posts

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya
error: Content is protected !!