ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ


ಧರ್ಮಸ್ಥಳ: ಶ್ರೀ ಧ ಮ ಆಂಗ್ಲ ಮಾಧ್ಯಮ ಧರ್ಮಸ್ಥಳದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪರಿಸರ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ಹಾಡು ನೃತ್ಯ , ಭಾಷಣ ಅಭಿನಯ ಗೀತೆ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದರ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.

ಮುಖ್ಯ ಅತಿಥಿಯಾಗಿ ಶ್ರೀ ಧ ಮ ತಾಂತ್ರಿಕ ವಿದ್ಯಾಲಯದ ಮುಖ್ಯ ಗ್ರಂಥಪಾಲಕಿ ಡಾ .ರಜತ ಪಿ. ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳ ಪ್ರತಿಭೆಗೆ ಮೆಚ್ಚುಗೆ ಸೂಚಿಸಿ ,ಪ್ರಕ್ರತಿಯ ನಡುವೆ ಮಕ್ಕಳು ಹೇಗೆ ಬೆಳೆಯಬೇಕು ಎಂಬುದನ್ನು ಎಳೆ ಎಳೆಯಾಗಿ ವಿವರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿಬಂದ ಕಾರ್ಯಕ್ರಮ, ದೇಶಭಕ್ತಿ ಗೀತೆಯೊಂದಿಗೆ ಪ್ರಾರಂಭವಾಗಿ , ಶಾಲಾ ವಿದ್ಯಾರ್ಥಿನಿ ಕು| ಸಾನ್ವಿತ ಹಾಗೂ ಸಮನ್ವೀ ಸ್ವಾಗತಿಸಿದರು . ಕುಮಾರಿ ಶ್ರೇಯಸಿ ಹಾಗೂ ವಿಹಾನ್ ಕಾರ್ಯಕ್ರಮವನ್ನು ನಿರೂಪಿಸಿ, ಸಾನಿಧ್ಯ ಹಾಗೂ ಆರುಹಿ ಧನ್ಯವಾದವನ್ನು ಅರ್ಪಿಸಿದರು. ಶಾಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಸಹಕರಿಸಿದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya
error: Content is protected !!