25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಕೂಟ ಮಹಾ ಜಗತ್ತು ಸಾಲಿಗ್ರಾಮ 70ನೇ ಕೇಂದ್ರೀಯ ಮಹಾಧಿವೇಶನ: ಬೆಳ್ತಂಗಡಿ ಮಹಿಳಾ ವೇದಿಕೆಯ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!