22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya
error: Content is protected !!