23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

ಮಡಂತ್ಯಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ 36ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ. 17ರಂದು ಮಡಂತ್ಯಾರು ಗಣಪತಿ ಮಂಟಪದ ಸಿಂಧೂರ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.

ಶ್ರೀ ಕ್ಷೇತ್ರ ಬಳ್ಳಮಂಜದ ಆನುವಂಶೀಯ ಆಡಳಿತ ಮೊಕ್ತೇಸರರು ಡಾ| ಹರ್ಷ ಸಂಪಿಗೆತ್ತಾಯ ಉದ್ಘಾಟಿಸಲಿರುವರು.
ಪುಂಜಾಲಕಟ್ಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರು ನಾಗೇಶ್ ಪ್ರಭು ಅಧ್ಯಕ್ಷತೆಯನ್ನು ವಹಿಸಲಿರುವರು. ಕಿರಣ್ ಕುಮಾರ್ ಮಂಜಿಲ ‘ಕಾಮಧೇನು’ ಆರಂಬೋಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಸಮಾರೋಪ ಸಮಾರಂಭದಲ್ಲಿ ಗುರುನಮನ ಕಾರ್ಯಕ್ರಮ ನಡೆಯಲಿದ್ದು ಸಂಸದ ಕ್ಯಾ| ಬ್ರಿಜೇಶ್ ಚೌಟ ಗುರುನಮನ ನೆರವೇರಿಸಲಿರುವರು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ, ಉದ್ಯಮಿ ಸತೀಶ್‌ ಶೆಟ್ಟಿ, ಬೋಳದಗುತ್ತು, ನಿಖಿಲ್ ಪಿ. ಬಂಗೇರ, ‘ಪ್ರಕೃತಿ’, ಮದ್ದಡ್ಕ, ಆಕಾಶ್ ಮಾಣೂರು ಭಾಗವಹಿಸಲಿರುವರು.

ವಿವಿಧ ಆಟೋಟಗಳು: ಬೈಕ್ ರೇಸ್, ತ್ರೋಬಾಲ್, ಕ್ರಾಸ್ ಕಂಟ್ರಿ, ಹಗ್ಗ ಜಗ್ಗಾಟ ,ಶ್ರೀ ಕೃಷ್ಣ ವೇಷ, ರೀಲ್ಸ್ ಸ್ಪರ್ಧೆ, ಅಡಿಕೆ ಮರ ಏರುವುದು, ಗೋಣಿಚೀಲ ಓಟ, ರಂಗೋಲಿ, ಸ್ಲೋ ಸೈಕಲ್ ಬ್ಯಾಲೆನ್ಸ್, ಮೊಸರು ಕುಡಿಕೆ, ಗೋವಿಂದ ಸ್ಪರ್ಧೆ ಏರ್ಪಡಿಸಲಾಗಿದೆ.

ಸಂಜೆ ಗಂಟೆ 5ರಿಂದ ಮಡಂತ್ಯಾರು ಸೇವಾ ಸಹಕಾರಿ ಬ್ಯಾಂಕಿನ ಬಳಿಯಿಂದ ಪ್ರಸಿದ್ಧ ಕುಣಿತ ಭಜನಾ ತಂಡಗಳೊಂದಿಗೆ ಶ್ರೀ ಕೃಷ್ಣನ ವೈಭವದ ಮೆರವಣಿಗೆ ಹಾಗೂ. ರಾತ್ರಿ 8 ರಿಂದ ನೃತ್ಯ ವೈಭವ ಜರಗಲಿರುವುದು ಎಂದು ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ ತಿಳಿಸಿದ್ದಾರೆ.

Related posts

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಇಂದಬೆಟ್ಟು ಗ್ರಾ.ಪಂ ನಲ್ಲಿ ಕಾಮಗಾರಿಗಳಲ್ಲಿ ಅವ್ಯವಹಾರ ಪ್ರಕರಣ: ಕಾಮಗಾರಿಗಳಲ್ಲಿ ಕತ೯ವ್ಯ ಲೋಪ ನಡೆದಿರುವುದು ತನಿಖೆಯಿಂದ ಬಹಿರಂಗ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya
error: Content is protected !!