July 23, 2026
ಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿ

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

ಉಜಿರೆ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ, ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆ.14 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.

ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ಅಧ್ಯಕ್ಷ ವಿಷ್ಣು ಮರಾಟೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಜರಂಗದಳ ಪ್ರಾಂತ ಬಲೋ ಪಾಸಾನ ಪ್ರಮುಖ್, ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ನರೇಶ್ ರೆಡ್ಡಿ ದಿಕ್ಸೂಚಿ ಭಾಷಣವನ್ನು ನೆರವೇರಿಸಿದರು.

ವೇದಿಕೆಯಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾ0ಚೋಡು, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಉದ್ಯಮಿ ಪದ್ಮನಾಭ ಶೆಟ್ಟಿ ಉಜಿರೆ, ಪ್ರಸಾದ್ ಗೌಡ ಉಜಿರೆ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷರು ಗ್ರಾಮ ಸಮಿತಿ ಉಜಿರೆ, ಗೌರವ್ ಉಜಿರೆ ಭಜರಂಗದಳ ಸಹ ಸಂಯೋಜಕ್ ಬೆಳ್ತಂಗಡಿ ಪ್ರಖಂಡ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಘ ಚಾಲಕ ವಿನಯ್, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಪ್ರಖಂಡ ಕಾರ್ಯದರ್ಶಿ ರಮೇಶ್ ಉಜಿರೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಭಕ್ತರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಶಾರದಾ ಮಂಟಪದಿಂದ ಉಜಿರೆ ಪೇಟೆಯ ವರೆಗೆ ಪಂಜಿನ ಮೆರವಣಿಗೆ ನಡೆಯಿತು. ಸಂತೋಷ ಅತ್ತಾಜೆ ಗೊರಕ್ಷಾ ಪ್ರಮುಕ್, ಬೆಳ್ತಂಗಡಿ ಪ್ರಖಂಡ ಸ್ವಾಗತಿಸಿದರು. ಮೋಹನ್ ಬೆಳ್ತಂಗಡಿ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ ನಿರೂಪಿಸಿ ವಂದಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿಶೇಷ ಕಾಯ೯ಕಾರಿಣಿ ಸಭೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕಲ್ಮಂಜ : ವೇದಮೂರ್ತಿ ಕೇಶವ ಭಟ್ ಚಿಪ್ಳೂಣ್ಕರ್ ನಿಧನ

Suddi Udaya

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya
error: Content is protected !!