September 6, 2026
ಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿ

ಉಜಿರೆಯಲ್ಲಿ ಅಖಂಡ ಭಾರತ ಸಂಕಲ್ಪ ದಿನ: ಪಂಜಿನ ಮೆರವಣಿಗೆ

ಉಜಿರೆ: ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ, ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆ.14 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು.

ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ಅಧ್ಯಕ್ಷ ವಿಷ್ಣು ಮರಾಟೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಭಜರಂಗದಳ ಪ್ರಾಂತ ಬಲೋ ಪಾಸಾನ ಪ್ರಮುಖ್, ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತದ ನರೇಶ್ ರೆಡ್ಡಿ ದಿಕ್ಸೂಚಿ ಭಾಷಣವನ್ನು ನೆರವೇರಿಸಿದರು.

ವೇದಿಕೆಯಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾ0ಚೋಡು, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಉದ್ಯಮಿ ಪದ್ಮನಾಭ ಶೆಟ್ಟಿ ಉಜಿರೆ, ಪ್ರಸಾದ್ ಗೌಡ ಉಜಿರೆ ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷರು ಗ್ರಾಮ ಸಮಿತಿ ಉಜಿರೆ, ಗೌರವ್ ಉಜಿರೆ ಭಜರಂಗದಳ ಸಹ ಸಂಯೋಜಕ್ ಬೆಳ್ತಂಗಡಿ ಪ್ರಖಂಡ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಸಂಘ ಚಾಲಕ ವಿನಯ್, ದಿನೇಶ್ ಚಾರ್ಮಾಡಿ ಭಜರಂಗದಳ ಸಹ ಸಂಯೋಜಕ್ ಪುತ್ತೂರು ಜಿಲ್ಲೆ, ಪ್ರಖಂಡ ಕಾರ್ಯದರ್ಶಿ ರಮೇಶ್ ಉಜಿರೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ದೇಶ ಭಕ್ತರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಶಾರದಾ ಮಂಟಪದಿಂದ ಉಜಿರೆ ಪೇಟೆಯ ವರೆಗೆ ಪಂಜಿನ ಮೆರವಣಿಗೆ ನಡೆಯಿತು. ಸಂತೋಷ ಅತ್ತಾಜೆ ಗೊರಕ್ಷಾ ಪ್ರಮುಕ್, ಬೆಳ್ತಂಗಡಿ ಪ್ರಖಂಡ ಸ್ವಾಗತಿಸಿದರು. ಮೋಹನ್ ಬೆಳ್ತಂಗಡಿ ಸೇವಾ ಪ್ರಮುಖ್ ಬೆಳ್ತಂಗಡಿ ಪ್ರಖಂಡ ನಿರೂಪಿಸಿ ವಂದಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ಮುಂಡೂರು ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕುಣಿತ ಭಜನೋತ್ಸವ

Suddi Udaya

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya
error: Content is protected !!