ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮಂಗಳೂರು ಎಂದು ಬದಲಾವಣೆಗೆ ಆಗ್ರಹ ಮಾಡುತ್ತಿದ್ದಾರೆ. ಮಂಗಳೂರು ಅನ್ನೋದು ಒಂದು ಬ್ರಾಂಡ್ ಆಗಿರುವ ಹೆಸರು. ನಾವು ಎಲ್ಲೆಲ್ಲಾ ವ್ಯಾಪಾರ ಮಾಡುತ್ತೇವೆ, ಎಲ್ಲೆಲ್ಲಾ ಇದ್ದೇವೆ, ನಾವು ಮಂಗಳೂರಿನವರು ಎಂದು ಗುರುತಿಸಿಕೊಂಡವರು. 1931ರಿಂದ ಎಸ್.ಯು.ಪಣಿಯಾಡಿ ಅವರ ಕಾಲದಿಂದಲೂ ಮರುನಾಮಕರಣ ಹೋರಾಟ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸ್ಥಳಗಳನ್ನು ಮಂಗಳೂರು ಹೆಸರಲ್ಲಿ ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯೂ ಮಂಗಳೂರು ಸಮಾಚಾರ, ಮಂಗಳೂರು ಎಂಬ ಹೆಸರು ಜಗಜ್ಜಾಹಿರವಾಗಿರುವಂಥ ಹೆಸರಾಗಿದೆ” ಎಂದು ವಿವರಿಸಿದರು.

Related posts

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!