July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡುವಂತೆ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿಅವರು, “ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕು ಎಂದು ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮಂಗಳೂರು ಎಂದು ಬದಲಾವಣೆಗೆ ಆಗ್ರಹ ಮಾಡುತ್ತಿದ್ದಾರೆ. ಮಂಗಳೂರು ಅನ್ನೋದು ಒಂದು ಬ್ರಾಂಡ್ ಆಗಿರುವ ಹೆಸರು. ನಾವು ಎಲ್ಲೆಲ್ಲಾ ವ್ಯಾಪಾರ ಮಾಡುತ್ತೇವೆ, ಎಲ್ಲೆಲ್ಲಾ ಇದ್ದೇವೆ, ನಾವು ಮಂಗಳೂರಿನವರು ಎಂದು ಗುರುತಿಸಿಕೊಂಡವರು. 1931ರಿಂದ ಎಸ್.ಯು.ಪಣಿಯಾಡಿ ಅವರ ಕಾಲದಿಂದಲೂ ಮರುನಾಮಕರಣ ಹೋರಾಟ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಸ್ಥಳಗಳನ್ನು ಮಂಗಳೂರು ಹೆಸರಲ್ಲಿ ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆಯೂ ಮಂಗಳೂರು ಸಮಾಚಾರ, ಮಂಗಳೂರು ಎಂಬ ಹೆಸರು ಜಗಜ್ಜಾಹಿರವಾಗಿರುವಂಥ ಹೆಸರಾಗಿದೆ” ಎಂದು ವಿವರಿಸಿದರು.

Related posts

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya
error: Content is protected !!